Home ಟಾಪ್ ಸುದ್ದಿಗಳು ಸಾವರ್ಕರ್ ಫೋಟೊಗೆ ಮೊಟ್ಟೆ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ

ಸಾವರ್ಕರ್ ಫೋಟೊಗೆ ಮೊಟ್ಟೆ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ

ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಎದುರು ಯುವಕರು ಸಾವರ್ಕರ್ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಭಟನೆ ನೇತೃತ್ವ ವಹಿಸಿದ್ದ ಎಐಸಿಸಿ ಸದಸ್ಯ ದೀಪಕ ಚಿಂಚೋರೆ, ನಾನು ಅದನ್ನು ನೋಡಿಲ್ಲ. ಅದು ಪೂರ್ವನಿಯೋಜಿತವೂ ಅಲ್ಲ. ಯಾರಾದರೂ ಬಿಜೆಪಿಯವರೇ ಮಾಡಿಸಿರಬಹುದು. ನಮ್ಮಲ್ಲಿ ಅಂತಹ ಸಂಸ್ಕೃತಿ ಇಲ್ಲ. ಬಿಜೆಪಿಯಲ್ಲಿ ಆ ಸಂಸ್ಕೃತಿ ಇದೆ ಎಂದು ಹೇಳಿದರು.


ನಮ್ಮ ಕಾರ್ಯಕರ್ತರು ಅಂಥವರಲ್ಲ. ಶಾಂತಿಯುತವಾದ ಪ್ರತಿಭಟನೆ ಮಾಡಿದ್ದೇವೆ. ಕೇವಲ ಅರಗ ಜ್ಞಾನೇಂದ್ರ ಪ್ರತಿಕೃತಿ ಮಾತ್ರ ದಹಿಸಿದ್ದೇವೆ. ಅಂಥದ್ದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version