ಹರ್ಯಾಣ । ಜೈ ಶ್ರೀರಾಮ್ ಕೂಗುವಂತೆ ಬಲವಂತಪಡಿಸಿ ಮುಸ್ಲಿಮ್ ಯುವಕನಿಗೆ ಮಾರಣಾಂತಿಕ ಹಲ್ಲೆ

Prasthutha|

ಚಂಡೀಗಢ: ಜೈ ಶ್ರೀರಾಮ್ ಕೂಗುವಂತೆ ಬಲವಂತಪಡಿಸಿ ಮುಸ್ಲಿಮ್ ಯುವಕನೊಬ್ಬನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹರ್ಯಾಣದ ನುಹ್ ಎಂಬಲ್ಲಿ ನಡೆದಿದೆ.

- Advertisement -

ಹರ್ಯಾಣ ಮೂಲದ ಮೆಕ್ಯಾನಿಕ್ ಆಗಿರುವ ಅರ್ಬಾಝ್ ಎಂಬಾತನೇ ಸಂಘಪರಿವಾರ ಕಾರ್ಯಕರ್ತರಿಂದ ಹಲ್ಲೆಗೊಳಗಾದವನಾಗಿದ್ದು, ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತ ಅರ್ಬಾಝ್, ಹಲ್ಲೆಕೋರರು ಅಶ್ಲೀಲ ಪದ ಬಳಕೆಯ ಜೊತೆಗೆ ಜೈ ಶ್ರೀರಾಮ್ ಕೂಗುವಂತೆ ಬಲವಂತ ಪಡಿಸಿದ್ದು, ಗ್ರೈಂಡರ್ ಮೂಲಕ ಕೈಯನ್ನು ಕತ್ತರಿಸಲು ಪ್ರಯತ್ನಿಸಿದ್ದರು ಎಂದು ದೂರಿದ್ದಾರೆ.

- Advertisement -

ಮಾತ್ರವಲ್ಲ ಜೈ ಶ್ರೀರಾಮ್ ಕೂಗಿ ಹಿಂದೂ ಧರ್ಮಕ್ಕೆ ಮತಾಂತರ ಆಗದಿದ್ದರೆ ಜೀವಂತ ಸಮಾಧಿ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸದ್ಯ ಜೀತು, ಚಂದು ಮತ್ತು ಇತರ 15 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 148,149,323,342506,379B ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp