Home ಟಾಪ್ ಸುದ್ದಿಗಳು ಕ್ರಿಕೆಟ್ ನಲ್ಲೂ ಎಸ್ ಸಿ –ಎಸ್ ಟಿ ಗೆ ಮೀಸಲಾತಿ ನೀಡಬೇಕು: ನಟ ಚೇತನ್

ಕ್ರಿಕೆಟ್ ನಲ್ಲೂ ಎಸ್ ಸಿ –ಎಸ್ ಟಿ ಗೆ ಮೀಸಲಾತಿ ನೀಡಬೇಕು: ನಟ ಚೇತನ್

ಚಾಮರಾಜನಗರ: ಭಾರತೀಯ ಕ್ರಿಕೆಟ್ ನಲ್ಲಿ ಶೇ. 70ರಷ್ಟು ಮೇಲ್ಜಾತಿಯವರೇ ಇದ್ದಾರೆ. ಹೀಗಾಗಿ ಕ್ರಿಕೆಟ್’ನಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ನಟ ಚೇತನ್ ಒತ್ತಾಯಿಸಿದ್ದಾರೆ.


ಚಾಮರಾಜನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆದ ಅಂಬೇಡ್ಕರ್ ಪರಿನಿಬ್ಬಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದಲ್ಲಿ 2016ರಿಂದ 6 ಮಂದಿ ಕರಿಯರಿಗೆ ಮೀಸಲಾತಿ ನೀಡಲಾಗುತ್ತಿದೆ. ಅದೇ ರೀತಿ ಭಾರತೀಯ ಕ್ರಿಕೆಟ್ ನಲ್ಲೂ ಮೀಸಲಾತಿ ಸಿಗಬೇಕು. ಇಲ್ಲಿನ ಕ್ರಿಕೆಟ್ ಶ್ರೀಮಂತವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ನೀಡಿದಲ್ಲಿ ಕ್ರಿಕೆಟ್ ತಂಡ ಇನ್ನಷ್ಟು ಉತ್ತಮವಾಗುತ್ತದೆ ಎಂದರು.


ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ನಮಗೆ ಮೀಸಲಾತಿ ಎಂದರೆ ಪ್ರತಿಯೊಂದು ಸಮುದಾಯಕ್ಕೂ ಆಯಾ ಜನಸಂಖ್ಯೆ ಆಧಾರದ ಮೇಲೆ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಒಂದು ಪ್ರಯತ್ನವಾಗಿದೆ ಎಂದು ಹೇಳಿದರು.

Join Whatsapp
Exit mobile version