ಬುಧವಾರ ಎಂದಿನಂತೆ ಶಾಲಾ-ಕಾಲೇಜು ತರಗತಿ ನಡೆಯಲಿದೆ: ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ

Prasthutha|

ಮಂಗಳೂರು: ಬುಧವಾರ ನಿಗದಿಯಂತೆ ಶಾಲಾ ಕಾಲೇಜು ತರಗತಿಗಳು ನಡೆಯಲಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವೈ.ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ.

- Advertisement -

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಬಂದಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಮುಂದುವರಿಯಲಿದೆ. ಆದರೆ ನಾಳೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Join Whatsapp