ಶಾಲಾ, ಕಾಲೇಜುಗಳ ಮುಂದಿನ ಬೇಸಿಗೆ ರಜೆ ಕಡಿತ : ಸಚಿವ ಸುರೇಶ್ ಕುಮಾರ್

Prasthutha|

ಬೆಳಗಾವಿ : ಕಳೆದ ವರ್ಷ ಕೊರೊನದಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದುದರಿಂದ ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -

ಕೊರೊನ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ ಕಾಲೇಜುಗಳು ಆರಂಭಗೊಂಡಿಲ್ಲ, ತಡವಾಗಿ ಶಾಲಾ ಕಾಲೇಜು ಆರಂಭಗೊಂಡಿರುವುದರಿಂದ ಈ ವರ್ಷದ ಬೇಸಿಗೆ ರಜೆ ಕಡಿತ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಕಾರಣ ಮಕ್ಕಳು ಶಿಕ್ಷಣದಿಂದ ದೂರ ಸರಿಯುತ್ತಿದ್ದಾರೆ. ಅಲ್ಲದೆ, ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.  

Join Whatsapp