Home Uncategorized ಕೊಡಗು: ಸೋಮವಾರದಿಂದ ಶಾಲೆ ಓಪನ್: ಗಲಭೆ ಆಗದಂತೆ ಎಚ್ಚರ ವಹಿಸಿ ಜಿಲ್ಲಾಧಿಕಾರಿ

ಕೊಡಗು: ಸೋಮವಾರದಿಂದ ಶಾಲೆ ಓಪನ್: ಗಲಭೆ ಆಗದಂತೆ ಎಚ್ಚರ ವಹಿಸಿ ಜಿಲ್ಲಾಧಿಕಾರಿ

ಮಡಿಕೇರಿ: ಸೋಮವಾರದಿಂದ ರಾಜ್ಯಾದ್ಯಂತ ಶಾಲೆ ಪ್ರಾರಂಭವಾಗಳಿದ್ದು,  ಕೊಡಗಿನಲ್ಲಿ ಯಾವುದೇ ಗಲಭೆ ಆಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು, ಪ್ರಾಂಶುಪಾಲರು , ಮುಖ್ಯ ಶಿಕ್ಷಕರು ಸಭೆಯಲ್ಲಿ ಭಾಗಿಯಾಗಿದ್ದು, ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ.  ಧಾರ್ಮಿಕ ಉಡುಪು ಧರಿಸಿ ಶಾಲೆಗೆ ಬರುವಂತಿಲ್ಲ.  ವಿದ್ಯಾರ್ಥಿಗಳ ಪೋಷಕರಿಗೆ ಮನವರಿಕೆ ಮಾಡಿ ಕೊಡಿ. ನಿಗದಿಪಡಿಸಿರುವ ಸಮವಸ್ತ್ರ ಧರಿಸಲು  ಸೂಚನೆ ನೀಡಲಾಗಿದ್ದು, ಶಾಂತಿ ಸೌಹಾರ್ದತೆಗೆ ದಕ್ಕೆ ತರಬೇಡಿ.  ಯಾವುದೇ ಸಮಸ್ಯೆ ಉಂಟಾದರೆ 112 ಗೆ ಕರೆ ಮಾಡಿ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಸೂಚನೆ ನೀಡಿದ್ದಾರೆ.

 ಅಲ್ಲದೆ, ಆದೇಶ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಎಚ್ಚರಿಕೆ ನೀಡಿದ್ದಾರೆ.

Join Whatsapp
Exit mobile version