ರಾಜ್ಯದಲ್ಲಿ ಭಾರಿ ಮಳೆ: ಉಡುಪಿ, ದಾವಣಗೆರೆ, ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

Prasthutha|

ಉಡುಪಿ: ರಾಜ್ಯದ ಮಳೆ ಆರ್ಭಟ ಮುಂದುವರೆದಿದ್ದು, ಉಡುಪಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಘೋಷಿಸಿದ್ದಾರೆ.

 ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ 1ರಿಂದ 10ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಹಿಸಿ ರಜೆ ನೀಡಲಾಗಿದೆ.

- Advertisement -

ಶಿವಮೊಗ್ಗದಲ್ಲಿ ಇಂದೂ ಕೂಡ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಘೋಷಣೆ ಮಾಡಿದ್ದಾರೆ. ಶುಕ್ರವಾರವೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ ಕಾರಣ ರಜೆ ನೀಡಲಾಗಿದೆ. ಈಗಾಗಲೇ ಮಳೆಯಿಂದ ನಗರದ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ.

Join Whatsapp