ಕಾಪು | ಗುಜರಿ ಅಂಗಡಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

Prasthutha|

ಕಾಪು: ಕಾಪು ಗುಜರಿ‌ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.

- Advertisement -

ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕ ವೀರಪ್ಪ ಎಂಬವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆಯಲ್ಲಿ ಗುಜರಿ ಅಂಗಡಿಯ ಪಾಲುದಾರ ರಜಬ್ ಬ್ಯಾರಿ ಚಂದ್ರನಗರ, ಮ್ಯಾನೇಜರ್ ರಜಬ್ ಅಲಿ ಮಲ್ಲಾರು ಸ್ಥಳದಲ್ಲೇ ಮೃತಪಟ್ಟಿದ್ದು, ನಯಾಝ್, ವೀರಪ್ಪ ಸಹಿತ 5 ಮಂದಿ ಗಾಯಗೊಂಡು‌ ಚಿಕಿತ್ಸೆಗಾಗಿ  ಆಸ್ಪತ್ರೆಗೆ ದಾಖಲಾಗಿದ್ದರು. ಗಾಯಾಳುಗಳ ಪೈಕಿ‌ ಹಸನಬ್ಬ, ವೀರೇಶ್ ಮತ್ತು ಫಹೀಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp