ಎನ್‌ಡಿಎ ಆಡಳಿತದ ವಿಧ್ವಂಸಕ ಕೃತ್ಯಗಳ ವಿರುದ್ಧ SDPI ಬೈಂದೂರ್ ಕ್ಷೇತ್ರ ಸಮಿತಿ ಪ್ರತಿಭಟನೆ

Prasthutha|

ಗಂಗೊಳ್ಳಿ: ಎನ್‌ಡಿಎ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೈಂದೂರ್ ಕ್ಷೇತ್ರ ಸಮಿತಿ ವತಿಯಿಂದ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು

- Advertisement -

ಪ್ರತಿಭಟನೆಯಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ SDPI ಉತ್ತರ ಕನ್ನಡ ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ, ಬಿಜೆಪಿ ಸರಕಾರ ಬಂದ ನಂತರ ಗುಂಪು ಹತ್ಯೆಯಂತಹ ಘೋರವಾದ ಕೃತ್ಯಕ್ಕೆ ಚಾಲನೆ ನೀಡಿದಂತಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಇಂತಹ ಕೃತ್ಯ ಮರುಕಳಿಸಿದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಬೈಂದೂರ್ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಿದ್ದೀಕ್ ಗಂಗೊಳ್ಳಿ, ಜೊತೆ ಕಾರ್ಯದರ್ಶಿ ಸಮೀರ್ ಗಂಗೊಳ್ಳಿ, ಗಂಗೊಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ರಜಬ್ ಗಂಗೊಳ್ಳಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.



Join Whatsapp