ಕೊಣಾಜೆ ಪೊಲೀಸ್ ಹೆಡ್ ಕಾನ್ಸ್ ಸ್ಟೆಬಲ್ ಜಗನ್ನಾಥ್ ನಿಧನಕ್ಕೆ SDPI ಸಂತಾಪ

Prasthutha|

 ಉಳ್ಳಾಲ: ಕೊಣಾಜೆ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರತ ಪೋಲೀಸ್ ಹೆಡ್ ಕಾನ್ಸ್ ಟೇಬಲ್ ಜಗನ್ನಾಥ ಅವರು ಹೃದಯಾಘಾತದಿಂದ ಮರಣ ಹೊಂದಿದ ವಿಚಾರ ತಿಳಿದು ಬಹಳ ಆಘಾತವಾಯಿತು. ಕೊಣಾಜೆ ಪೊಲೀಸ್ ಸ್ಟೇಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಎಲ್ಲರೊಂದಿಗೂ ಬಹಳ ಆತ್ಮೀಯರಾಗಿದ್ದರು ಮತ್ತು ಸ್ನೇಹಜೀವಿಯಾಗಿದ್ದುಕೊಂಡು ಜನಸ್ನೇಹಿ ಪೊಲೀಸ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದವರು ಎಂದು SDPI  ಮಂಗಳೂರು ವಿಧಾನಸಭಾ ಸಮಿತಿಯ ಕಾರ್ಯದರ್ಶಿ ಝಾಹಿದ್ ಮಲಾರ್ ಸಂತಾಪ ವ್ಯಕ್ತಪಡಿಸಿದ್ದಾರೆ

- Advertisement -

 ಜಗನ್ನಾಥ್ (44)  ಅವರು ಮೂಲತ: ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಇವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ.  ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ   ಝಾಹಿದ್ ಮಲಾರ್ ಸಂತಾಪ ವ್ಯಕ್ತಪಡಿಸಿದ್ದಾರೆ

Join Whatsapp