ಚಾಮರಾಜನಗರ ಎಸ್ ಡಿಪಿಐ ಕೌನ್ಸಿಲರ್ ಸಮೀವುಲ್ಲಾ ನಿಧನ

Prasthutha|

ಚಾಮರಾಜನಗರ: ಚಾಮರಾಜನಗರ ನಗರ ಸಭೆಯ ಎಸ್ ಡಿಪಿಐ ಕೌನ್ಸಿಲರ್ ಸಮೀವುಲ್ಲಾ ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.

- Advertisement -


ಚಾಮರಾಜನಗರ ನಗರ ಸಭೆಗೆ 6ನೇ ವಾರ್ಡ್ ನಿಂದ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಗೆದ್ದಿದ್ದ ಸಮೀವುಲ್ಲಾ ಅವರು, ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಮಾತ್ರವಲ್ಲ ಹಲವು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದರು.
ಚಾಮರಾಜನಗರದ ಹಲವು ಮಸೀದಿ, ಮದ್ರಸ ಸಮಿತಿಗಳಲ್ಲಿ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಅವರು, ಬಾಬರಿ ಮಸೀದಿಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲೆ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಅಸ್ವಸ್ಥರಾದ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಮೃತರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.


ಸಮೀವುಲ್ಲಾ ಅವರ ನಿಧನಕ್ಕೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಸೇರಿದಂತೆ ಹಲವು ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

Join Whatsapp