ಮೈಸೂರು ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಅಧಿಕಾರ ಸ್ವೀಕಾರ: ಎಸ್ ಡಿಪಿಐ ನಿಯೋಗದಿಂದ ಅಭಿನಂದನೆ

Prasthutha|

ಮೈಸೂರು: ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ರಾಜೇಂದ್ರ ಕೆ. ವಿ. ರವರನ್ನು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದ ನಿಯೋಗ ಭೇಟಿ ಮಾಡಿ ಶುಭ ಕೋರಿದರು.

- Advertisement -

ಜಿಲ್ಲಾಧ್ಯಕ್ಷ ರಫಾತ್ ಖಾನ್, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಫಿಉಲ್ಲಾ, ಜಿಲ್ಲಾ ಸಮಿತಿ ಸದಸ್ಯ ಉಮರ್ ಷರೀಫ್ ನಿಯೋಗದಲ್ಲಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷ ಜಿಲ್ಲಾಧಿಕಾರಿ ಎಂದೇ ಹೆಸರುಗಳಿಸಿದ್ದ ರಾಜೇಂದ್ರ ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿತ್ತು.

Join Whatsapp
Exit mobile version