ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಿ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗೆ SDPI ನಿಯೋಗ ಮನವಿ

Prasthutha|

ಪುತ್ತೂರು: ಮುಸ್ಲಿಮರ ಮೀಸಲಾತಿಯನ್ನು ಶೇಕಡಾ 8ಕ್ಕೆ ಏರಿಸಬೇಕು,ಕಾಂತರಾಜು ಅಯೋಗದ ವರದಿಯನ್ನು ಬಿಡುಗಡೆ ಮಾಡಬೇಕು ಮತ್ತು ಸದಾಶಿವ ಅಯೋಗದ ವರದಿಯನ್ನು ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂಬ ವಿಚಾರದಲ್ಲಿ ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಶಾಸಕರು ದ್ವನಿಯೆತ್ತಿ ಸರಕಾರದ ಮೇಲೆ ಒತ್ತಡ ಹೇರಲು ಆಗ್ರಹಿಸಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ನಿಯೋಗವು ಇಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರನ್ನು ಬೇಟಿಯಾಗಿ ಮನವಿ ಸಲ್ಲಿಸಿದರು.

- Advertisement -

SDPI ಪಕ್ಷದ ವತಿಯಿಂದ ಸಲ್ಲಿಸಿದ ಬೇಡಿಕೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದ ಶಾಸಕರು ಈ ಬಗ್ಗೆ ಸರಕಾರದ ಗಮನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿ ಮೀಸಲಾತಿ ಗೊಂದಲ ನಿವಾರಣೆ ಮತ್ತು ಅಯೋಗದ ವರದಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸಂಬಂದಪಟ್ಟವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.

 ಶಾಸಕರನ್ನು ಭೇಟಿಯಾದ ನಿಯೋಗದಲ್ಲಿ SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು , ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್,ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ , ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ,ಸಮಿತಿ ಸದಸ್ಯರಾದ ಅಬ್ದುಲ್ ರೆಹಮಾನ್(ರಹೀಂ) ಮತ್ತು ಪುತ್ತೂರು ನಗರಾಧ್ಯಕ್ಷರಾದ ಸಿರಾಜ್ ಕೂರ್ನಡ್ಕ ಮತ್ತು ಇತರರು ಉಪಸ್ಥಿತರಿದ್ದರು.



Join Whatsapp