ಕೊಡಗು: ಕಾಡಾನೆ ದಾಳಿಗೆ ಮೃತಪಟ್ಟ ವಿದ್ಯಾರ್ಥಿ ಆಶಿಕ್ ಮನೆಗೆ SDPI ನಿಯೋಗ ಭೇಟಿ

Prasthutha|

ಮಡಿಕೇರಿ: ಕಾಡಾನೆ ದಾಳಿಗೆ ಮೃತಪಟ್ಟ ವಿದ್ಯಾರ್ಥಿ ಆಶಿಕ್ ಮನೆಗೆ ಎಸ್ಡಿಪಿಐ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಹಾಗೂ  ಕುಟುಂಬದ ಜೀವನ ನಿರ್ವಹಣೆಗೆ ಪರಿಹಾರ ನೀಡಲು ಆಗ್ರಹ ಮಾಡಿದರು.

- Advertisement -

ಜಿಲ್ಲೆಯಲ್ಲಿ ಕಾರ್ಮಿಕರು, ವಿದ್ಯಾರ್ಥಿಗಳು,ರೈತರು ನಿರಂತರವಾಗಿ ಕಾಡಾನೆ ದಾಳಿಗೆ ಒಳಗಾಗುತ್ತಿದ್ದು ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಅರಣ್ಯ ಇಲಾಖೆ ಅಗತ್ಯ ಕ್ರಮ ವಹಿಸಬೇಕೆಂದು ತಿಳಿಸಿದರು.

ನಿಯೋಗದಲ್ಲಿ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ, ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಎಸ್ಡಿಪಿಐ ಬೆಂಬಲಿತ ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯ ಶಂಶೀರ್, ವಿಧಾನ ಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಆಶ್ರಫ್ ರವರು ಉಪಸ್ಥಿತರಿದ್ದರು.

Join Whatsapp