ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹ

Prasthutha|

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ನಾಯಕ, ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹಿಸಿದೆ.  

- Advertisement -

ಈ ಕುರಿತು ಟ್ವೀಟ್ ಮಾಡಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದಕ್ಷಿಣಕನ್ನಡ ಜಿಲ್ಲಾ ಘಟಕ, ಮಲ್ಲಿಕಾರ್ಜುನ  ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರಗ ಜ್ಞಾನೇಂದ್ರ ನಡೆ ಖಂಡನೀಯ. ಅವರ ವಿರುದ್ಧ SC ST ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಿ ಬಂಧಿಸುವ ಧೈರ್ಯ ಮುಖ್ಯಮಂತ್ರಿಗಳು ತೋರಬೇಕು. ಮೂಲ ನಿವಾಸಿಗಳಾದ ದಲಿತರ ಬಗ್ಗೆ ಬಿಜೆಪಿಗಿರುವ ಮನಸ್ಥಿತಿಯನ್ನು ಬಹಿರಂಗಪಡಿಸಿದೆ‌ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Join Whatsapp