Home ರಾಜ್ಯ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು SDPI ಆಗ್ರಹ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು SDPI ಆಗ್ರಹ

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ರವರ ಹೆಸರಿಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಶಿವಮೊಗ್ಗ ಜಿಲ್ಲಾ ಸಮಿತಿ ಆಗ್ರಹಿಸಿದೆ. ಕನ್ನಡಿಗರ ಹೆಮ್ಮಯಾಗಿರುವ ರಾಷ್ಟ್ರ ಕವಿ ಕುವೆಂಪು ಹೆಸರಿಡಲು ಸರ್ಕಾರ ಮುಂದಾಗಬೇಕಾಗಿದೆ. ಈ ಬಗ್ಗೆ SDPI ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಮನವಿ ನೀಡಲಾಯಿತು.


ನೂತನವಾಗಿ ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬಿಜೆಪಿ ಸರ್ಕಾರದ ಮಂತ್ರಿ ಮಂಡಲದಲ್ಲಿ ಚರ್ಚೆಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೆಸರಿಡಲು ಮುಂದಾಗಿರುವ ಬಿಜೆಪಿ ಸರ್ಕಾರದ ನಡೆ ಖಂಡನೀಯವಾಗಿದೆ. ಭ್ರಷ್ಟಾಚಾರದಲ್ಲಿ ಜೈಲು ಸೇರಿ ರಾಜ್ಯದ ಮಾನ ಮರ್ಯಾದೆ ಹರಾಜು ಮಾಡಿದ್ದ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೆಸರು ಇಡಲು ಬೊಮ್ಮಾಯಿ ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ನಿಯೋಗವು ಅಭಿಪ್ರಯಾಪಟ್ಟಿದೆ.


ನಮ್ಮ ಕನ್ನಡದ ಹೆಮ್ಮೆ, ಶಿವಮೊಗ್ಗ ಜಿಲ್ಲೆಯವರಾದ ರಾಷ್ಟ್ರ ಕವಿ ಕುವೆಂಪು ರವರ ಹೆಸರಿಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತದೆ ಹಾಗೆಯೇ ಶಿವಮೊಗ್ಗ ಜಿಲ್ಲಾಡಳಿತವು ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡಲು ಪ್ರಸ್ತಾವನೆ ಸಲ್ಲಿಸಲಬೇಕೆಂದು ಸಮಿತಿ ಆಗ್ರಹಿಸಿದೆ.


Join Whatsapp
Exit mobile version