ಬಜರಂಗದಳ ಮುಖಂಡನಿಂದ ದಲಿತನ ಹತ್ಯೆ: ಸ್ವಯಂ ಘೋಷಿತ ‘ಹಿಂದೂಗಳ ರಕ್ಷಕ’ ಎನ್ನುವ ಹರೀಶ್ ಪೂಂಜಾ ನ್ಯಾಯ ಒದಗಿಸಿ ಕೊಡಲಿ: ಎಸ್ ಡಿ ಪಿ ಐ ಆಗ್ರಹ

Prasthutha|

ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ನೀಡಲು ಒತ್ತಾಯ

- Advertisement -

ಮಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಎಂಬಲ್ಲಿ ಬಜರಂಗದಳ ಮುಖಂಡ ಹಾಗೂ ಬಿಜೆಪಿ ಕಾರ್ಯಕರ್ತ ಕೃಷ್ಣ ಡಿ ಎಂಬಾತ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಹತ್ಯೆಗೈದ ಘಟನೆ ಖಂಡನೀಯ ಎಂದು ಎಸ್ ಡಿ ಪಿ ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಹಿಂದುಗಳ ರಕ್ಷಕ’ ಎಂದು ಜನಮನಸ್ಸನ್ನು ಕೆರಳಿಸಿ, ಧರ್ಮ ರಾಜಕಾರಣ ಮಾಡುತ್ತಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ಹಿಂದೂ ಯುವಕನನ್ನು ಕೊಂದ ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತನನ್ನು ಕಠಿಣ ಶಿಕ್ಷೆಗೊಳಪಡಿಸಿ ಹಾಗೂ ಹತ್ಯೆಯಾದ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು.

- Advertisement -

ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಹತ್ಯೆಗೊಳಪಟ್ಟ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರಧನವನ್ನು ನೀಡಬೇಕು. ಆರೋಪಿಯನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.



Join Whatsapp