ಕರ್ನಾಟಕ ಬಂದ್: SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ

Prasthutha|

ಮಂಗಳೂರು: ಮುಸ್ಲಿಂ ವಿಧ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿರ್ಬಂಧ ಹೇರಿದ ಸರಕಾರದ ನಿಲುವನ್ನು ಎತ್ತಿಹಿಡಿದ ಕರ್ನಾಟಕ ಹೈ ಕೋರ್ಟಿನ ಅಸಂವಿಧಾನಿಕ ತೀರ್ಪನ್ನು ವಿರೋಧಿಸಿ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ SDPI ಸಂಪೂರ್ಣ ಬೆಂಬಲ ಘೋಷಿಸಿದೆ.

- Advertisement -

ನಾಲೆ ಕರೆನೀಡಲಾಗಿರುವ ಕರ್ನಾಟಕ ಬಂದ್ ಅನ್ನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಯಶಸ್ವಿ ಗೊಳಿಸುವಂತೆ SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ವಿನಂತಿಸಿದ್ದಾರೆ. ಸ್ವಯಂಪ್ರೇರಿತವಾಗಿ ನಡೆಯುವ ಈ ಬಂದ್ ಗೆ ಎಲ್ಲಾ ವರ್ತಕರು ,ವಿಧ್ಯಾ ಸಂಸ್ಥೆಗಳು, ಅಟೋ,ಟ್ಯಾಕ್ಸಿ ಮತ್ತು ಬಸ್ಸು ಚಾಲಕರು ,ಮಾಲಕರು ಕಾರ್ಮಿಕ ಸಂಘಟನೆಗಳು ಸಹಕರಿಸುವ ಮೂಲಕ ಸಂವಿಧಾನ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಯುವ ಹೋರಾಟದಲ್ಲಿ ಭಾಗವಹಿಸಿ ಬಂದನ್ನು ಶಾಂತಿಯುತವಾಗಿ ನಡೆಸಲು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp