Home ಕರಾವಳಿ ಇಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಹಕ್ಕೊತ್ತಾಯ ಸಭೆಗೆ  SDPI ಸಂಪೂರ್ಣ ಬೆಂಬಲ

ಇಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಹಕ್ಕೊತ್ತಾಯ ಸಭೆಗೆ  SDPI ಸಂಪೂರ್ಣ ಬೆಂಬಲ

ಮಂಗಳೂರು: ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಎಸ್’ಎಸ್’ಎಫ್ ಹಾಗೂ ಎಸ್’ ವೈ ಎಸ್ ಸಂಘಟನೆ ವತಿಯಿಂದ ಮಂಗಳವಾರ ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್’ಡಿಪಿಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್’ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ದಿನಾಂಕ 27 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ  ಪ್ರಜಾಸತ್ತಾತ್ಮಕವಾಗಿ ನಡೆಯುವ ಪ್ರತಿಭಟನೆಯಲ್ಲಿ ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಬೇಕು. ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಪಾಲ್ಗೊಂಡು ಇದನ್ನು ಯಶಸ್ವಿಗೊಳಿಸಬೇಕು ಎಂದು ಅನ್ವರ್ ಸಾದಾತ್ ಮನವಿ ಮಾಡಿದ್ದಾರೆ.

Join Whatsapp
Exit mobile version