ರಿಕ್ಷಾ ಅಪಘಾತವಾದ ತಕ್ಷಣ ತಾಯಿಯನ್ನು ರಕ್ಷಿಸಿದ ಬಾಲಕಿಗೆ SDPI ಸನ್ಮಾನ

Prasthutha|

ಮಂಗಳೂರು: ಕಿನ್ನಿಗೋಳಿಯಲ್ಲಿ ನಡೆದ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸುವ ಸಲುವಾಗಿ ತನ್ನ ವಯಸ್ಸು, ಸಾಮರ್ಥ್ಯವನ್ನು ಲೆಕ್ಕಿಸದೆ, ಆಟೋರಿಕ್ಷಾವನ್ನು ಎತ್ತಿ ತನ್ನ ತಾಯಿಯನ್ನು ರಕ್ಷಿಸಿದ ಕುಮಾರಿ ವೈಭವಿ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸಮಿತಿಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

- Advertisement -


ಈ ಸಂದರ್ಭದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸಮಿತಿಯ ಅಧ್ಯಕ್ಷರಾದ ಜಲೀಲ್ ಜೆಎಚ್, ಮುಲ್ಕಿ ಬ್ಲಾಕ್ ಜೊತೆ ಕಾರ್ಯದರ್ಶಿ ನವಾಝ್ ಕಲ್ಕರೆ, ಪಟ್ಟಣ ಪಂಚಾಯತ್ ಸಮಿತಿ ಕಾರ್ಯದರ್ಶಿ ನಕಾಶ್, ಉಪಾಧ್ಯಕ್ಷರಾದ ಆರಿಫ್, ಮುಲ್ಕಿ-ಕಿನ್ನಿಗೋಳಿ ಲಾರಿ ಮಾಲಕರ ಸಂಘದ ಕಾರ್ಯದರ್ಶಿ ಅಬೂಬಕರ್ ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



Join Whatsapp