ಕರ್ನಾಟಕ ಬಂದ್ ಗೆ SDPI ಸಂಪೂರ್ಣ ಬೆಂಬಲ: ಅಬ್ದುಲ್ ಮಜೀದ್

Prasthutha|

ಬೆಂಗಳೂರು: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ವಿರೋಧಿಸಿ ವಿವಿಧ ಮುಸ್ಲಿಮ್ ಸಂಘಟನೆಗಳು ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಸೂಚಿಸಿದೆ.

- Advertisement -

ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಟ್ವೀಟ್ ಮಾಡಿ, ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದ್ದು, ಇದರ ವಿರುದ್ಧ ಕರ್ನಾಟಕದ ಮುಸ್ಲಿಮ್ ಧಾರ್ಮಿಕ ಪರಮೋಚ್ಚ ನೇತಾರ ಅಮೀರೇ ಶರಿಯತ್ ಮೌಲಾನ ಸಗೀರ್ ಅಹಮದ್ ರಶಾದಿ  ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದಾರೆ. ಈ ಬಂದ್ ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ಅಬ್ದುಲ್ ಮಜೀದ್ ಮೈಸೂರು ಟ್ವೀಟ್ ಮಾಡಿದ್ದಾರೆ.

Join Whatsapp