SDPI ಯಿಂದ ಚೊಕ್ಕಬೆಟ್ಟುವಿನಲ್ಲಿ ಮಾಹಿತಿ -ನಾಗರಿಕ ಸೇವಾ ಕೇಂದ್ರ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶ

Prasthutha|

ಸುರತ್ಕಲ್:  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆಯ 5ನೇ ವಾರ್ಡ್ ಸಮಿತಿ ವತಿಯಿಂದ ನೂತನ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರವನ್ನು SDPI ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಉದ್ಘಾಟಿಸುವ ಮೂಲಕ ಚಾಲನೆಯನ್ನು ನೀಡಿದರು.

- Advertisement -

ನಂತರ ನಡೆದ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ವಹಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರಾಜ್ಯ ರಾಜಕೀಯ ವಿದ್ಯಾಮಾನಗಳ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿದರು, ಪಕ್ಷವನ್ನು ತಳಮಟ್ಟದಲ್ಲಿ ಬಲಿಷ್ಠಗೊಳಿಸಿ  ಮುಂಬರುವ ತಾಲೂಕು, ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಚುಣಾವಣೆಗೆ ಈಗಲೇ ಸಜ್ಜಾಗುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ  ಕಾರ್ಯದರ್ಶಿ ಅಶ್ರಫ್ ಮಾಚಾರ್, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡ್ಡೂರು, ಜಮಾಲ್ ಜೋಕಟ್ಟೆ , ಉತ್ತರ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಅಝರ್ ಉಳಾಯಿಬೆಟ್ಟು, IEC ಕಾರ್ಯದರ್ಶಿ ನೌಶಾದ್ ಚೊಕ್ಕಬೆಟ್ಟು, ಸ್ಥಳೀಯ ಕಾರ್ಪರೇಟರ್ ಶಂಸಾದ್ ಅಬೂಬಕ್ಕರ್ ಉಪಸ್ಥಿತರಿದ್ದರು. ಅಝರ್ ಉಳಾಯಿಬೆಟ್ಟು ಸ್ವಾಗತಿಸಿದರು, ಇರ್ಫಾನ್ ಕಾನ ಕಾರ್ಯಕ್ರಮ ನಿರೂಪಿದರು.

Join Whatsapp