Home ಟಾಪ್ ಸುದ್ದಿಗಳು ಸ್ವಾಭಿಮಾನದ ರಾಜಕಾರಣಕ್ಕಾಗಿ ನಮ್ಮ ಪಕ್ಷಕ್ಕೆ ಬನ್ನಿ : ಸಿ ಎಂ ಇಬ್ರಾಹಿಂಗೆ SDPI ರಾಜ್ಯಾಧ್ಯಕ್ಷರ ಆಹ್ವಾನ

ಸ್ವಾಭಿಮಾನದ ರಾಜಕಾರಣಕ್ಕಾಗಿ ನಮ್ಮ ಪಕ್ಷಕ್ಕೆ ಬನ್ನಿ : ಸಿ ಎಂ ಇಬ್ರಾಹಿಂಗೆ SDPI ರಾಜ್ಯಾಧ್ಯಕ್ಷರ ಆಹ್ವಾನ

ಬೆಂಗಳೂರು : ಕಾಂಗ್ರೆಸ್ ತೊರೆಯುವ ಸನಿಹದಲ್ಲಿರುವ ಮಾಜಿ ಕೇಂದ್ರ ಸಚಿವ ಸಿ. ಎಂ. ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಗೆ ಆಹ್ವಾನಿಸಿದ ಬೆನ್ನಿಗೇ ಇದೀಗ ಎಸ್‌ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು, “ಘನತೆಯ ಮತ್ತು ಸ್ವಾಭಿಮಾನದ ರಾಜಕಾರಣಕ್ಕಾಗಿ ಇಬ್ರಾಹಿಂ ಅವರನ್ನು ಎಸ್ಡಿಪಿಐಗೆ ಗೌರವಪೂರ್ವಕವಾಗಿ ಆಹ್ವಾನಿಸುತ್ತೇನೆ. ಆದಷ್ಟು ಶೀಘ್ರ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬರುವಂತೆ ವಿನಂತಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿ. ಎಂ. ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನವನ್ನು ನಿರಾಕರಿಸಿದ ಬೆನ್ನಿಗೇ ಕಾಂಗ್ರೆಸ್ ಗೆ ವಿದಾಯ ಹೇಳುವ ಮಾತನ್ನಾಡಿದ್ದರು. ಆ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಇಬ್ರಾಹಿಂ ಅವರು ಜೆಡಿಎಸ್’ಗೆ ಬರುವುದಾದರೆ ಸ್ವಾಗತ ಎಂದು ಹೇಳಿದ್ದರು. ಈಗ ಎಸ್‌ಡಿಪಿಐ ಪಕ್ಷ ಕೂಡಾ ಇಬ್ರಾಹಿಂ ಅವರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದೆ.

ಕಾಂಗ್ರೆಸ್ ಪಕ್ಷದ ನಡೆಗಳಿಂದ ಬೇಸರಗೊಂಡಿರುವ ಇಬ್ರಾಹಿಂ ಅವರ ರಾಜಕಾರಣದ ಮುಂದಿನ ನಡೆ ಏನು ಎಂದು ಕಾದು ನೋಡಬೇಕಷ್ಟೇ.

Join Whatsapp
Exit mobile version