ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ 50ಕ್ಕೂ ಅಧಿಕ ಮುಖಂಡರಿಂದ SDPI ಸೇರ್ಪಡೆ

Prasthutha|

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾ ಉಸ್ತುವಾರಿ ಹಾಗೂ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್ ಇಸ್ಹಾಕ್ ಹುಸೇನ್ (ಖಾಲಿದ್) ಅವರ ನೇತೃತ್ವದಲ್ಲಿ ನಡೆಯಿತು.

- Advertisement -

ಈ ಸಂದರ್ಭದಲ್ಲಿ ಕವಿತಾಳ ಪಟ್ಟಣದ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಮುಹಮ್ಮದ್ ಫಯಾಝ್ ಹಾಗೂ ಉಪಾಧ್ಯಕ್ಷರಾಗಿ ಚಾಂದ್ ಪಾಷಾ, ಕಾರ್ಯದರ್ಶಿಯಾಗಿ ಮುಸ್ತಫಾ, ಸಹಕಾರ್ಯದರ್ಶಿಯಾಗಿ ರಸೂಲ್, ಕೋಶಾಧಿಕಾರಿಯಾಗಿ ಮುಹಮ್ಮದ್ ಅಮೀರ್ ಅಯ್ಕೆಯಾದರು.

ಈ ಸಮಾರಂಭದಲ್ಲಿ 50ಕ್ಕೂ ಹೆಚ್ಚು ಯುವಕರು ಮತ್ತು ಹಿರಿಯರು ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್ ಇಸ್ಹಾಕ್ ಹುಸೇನ್ ಮಾತನಾಡಿ, ಪಕ್ಷದ ಅಗತ್ಯತೆ ಮತ್ತು ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು.

- Advertisement -

ಇನ್ನೋರ್ವ ಅತಿಥಿ ಜಿಲ್ಲಾ ಸಮಿತಿ ಸದಸ್ಯರೂ ಆದ ಮೀರ್ ಅಲಿ ಅವರು ಪಕ್ಷದ ನಿಲುವಿನ ಕುರಿತು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಎಸ್ಡಿಪಿಐ ತಾಲೂಕು ಸಂಘಟನಾ ಕಾರ್ಯದರ್ಶಿಯಾದ ಜಿಲಾನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮೀರ್ ಅಲಿ ನೆರವೇರಿಸಿದರು.

Join Whatsapp