SDPI ಕೇರಳ ರಾಜ್ಯ ಸಮಿತಿ ಸದಸ್ಯನ ಮೇಲೆ ದಾಳಿ । ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Prasthutha|

ಎರ್ನಾಕುಲಂ: sdpi ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್ ಶಾನ್ ಅವರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

- Advertisement -


ತೀವ್ರ ಗಾಯಗೊಂಡಿದ್ದ ಎಸ್ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್ ಶಾನ್ ಅವರನ್ನು ಎರ್ನಾಕುಲಂ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಅಸುನೀಗಿದ್ದಾರೆ.


ಕಳೆದ ರಾತ್ರಿ 8.30 ರ ಸುಮಾರಿಗೆ ಶಾನ್ ಅವರು ತನ್ನ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ಕಾರೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಳಕ್ಕುರುಳಿದ ಶಾನ್ ಅವರ ಮೇಲೆ ಆರ್ ಎಸ್ ಎಸ್ ಕಾರ್ಯಕರ್ತರು ಏಕಾಏಕಿ ಮಾರಕಾಯುಧ ದಿಂದ ದಾಳಿ ನಡೆಸಿದ್ದಾರೆ. ಪರಿಣಾಮ ಅವರ ತಲೆ ಕೈಕಾಲು ಸೇರಿದಂತೆ ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ.

- Advertisement -

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ CCTV ದೃಶ್ಯಾವಳಿ ಬಿಡುಗಡೆಗೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಕೇರಳ sdpi ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ರಾತ್ರಿಯೇ ಪ್ರತಿಭಟನೆ ನಡೆಸಿದರು.

Join Whatsapp