ಸಚಿವ ಈಶ್ವರಪ್ಪನವರನ್ನು ಕೂಡಲೇ ಮಂತ್ರಿ ಸ್ಥಾನದಿಂದ ಮತ್ತು ಶಾಸಕನ ಸ್ಥಾನದಿಂದ ವಜಾಗೊಳಿಸಿ ಬಂಧಿಸಿ ಜೈಲಿಗಟ್ಟಿ: ಅಫ್ಸರ್ ಕೊಡ್ಲಿಪೇಟೆ

Prasthutha|

ಕುಶಾಲನಗರ: ಸಚಿವ ಈಶ್ವರಪ್ಪನವರನ್ನು ಕೂಡಲೇ ಮಂತ್ರಿ ಸ್ಥಾನದಿಂದ ಮತ್ತು ಶಾಸಕನ ಸ್ಥಾನದಿಂದ ವಜಾಗೊಳಿಸಿ ಬಂಧಿಸಿ ಜೈಲಿಗಟ್ಟುವಂತೆ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.

- Advertisement -

ಅವರು ಇಂದು ಕೊಡಗು ಜಿಲ್ಲೆಯಲ್ಲಿ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪನವರೇ ಮುಖ್ಯ ಕಾರಣವಾಗಿದ್ದಾರೆ ಎಂದು ಸಂತೋಷ್ ಪಾಟೀಲ್ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಈಶ್ವರಪ್ಪನವರ ಹೆಸರು ಬಹಿರಂಗವಾಗಿದ್ದು ಇದು ಒಂದು ಬಹಳ ಆತಂಕಕಾರಿ ವಿಷಯವಾಗಿದೆ ಆದ್ದರಿಂದ ಈಶ್ವರಪ್ಪನವರನ್ನು ಕೂಡಲೇ ಮಂತ್ರಿ ಸ್ಥಾನದಿಂದ ಮತ್ತು ಶಾಸಕನ ಸ್ಥಾನದಿಂದ ವಜಾಗೊಳಿಸಿ ಬಂಧನ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -

ಕುಶಾಲನಗರ ಘಟಕದ ವತಿಯಿಂದ ಇಂದು ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ, ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಉಸ್ಮಾನ್ ಸುಂಠಿಕೊಪ್ಪ, ಘಟಕ ಅಧ್ಯಕ್ಷ ಬಾಷಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Join Whatsapp