Home ಟಾಪ್ ಸುದ್ದಿಗಳು ಸಂತೋಷ್ ಆತ್ಮಹತ್ಯೆ: ಸಚಿವ ಸ್ಥಾನದಿಂದ ಈಶ್ವರಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ SDPI ಪ್ರತಿಭಟನೆ

ಸಂತೋಷ್ ಆತ್ಮಹತ್ಯೆ: ಸಚಿವ ಸ್ಥಾನದಿಂದ ಈಶ್ವರಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ SDPI ಪ್ರತಿಭಟನೆ

ಶಿವಮೊಗ್ಗ: ಉಡುಪಿಯ ಶಾಂಭವಿ ಲಾಡ್ಜ್’ನಲ್ಲಿ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ SDPI ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿತು.

ಶಿವಮೊಗ್ಗ SDPI ಜಿಲ್ಲಾಧ್ಯಕ್ಷ ಇಮ್ರಾನ್ ಶಿವಮೊಗ್ಗ ನೇತೃತ್ವದಲ್ಲಿ, ಭ್ರಷ್ಟಾಚಾರ ಆರೋಪಿ ಸಚಿವರನ್ನು ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ SDPI ಜಿಲ್ಲಾ ಉಪಾಧ್ಯಕ್ಷ ದೇವೆಂದ್ರ ಪಾಟೀಲ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮತ್ತಿತರರು ಉಪಸ್ಥಿತರಿದ್ದರು.

Join Whatsapp
Exit mobile version