ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ: SDPI ಪುದು ಗ್ರಾಮ ಸಮಿತಿ ವತಿಯಿಂದ ಧರಣಿ

Prasthutha|

ಫರಂಗಿಪೇಟೆ: “ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ, ಕೋಮು ವಿದ್ವೇಷ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಆಂದೋಲನದ ಅಂಗವಾಗಿ ಎಸ್.ಡಿ.ಪಿ.ಐ ಪುದು ಗ್ರಾಮ ಸಮಿತಿ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಅಣುಕು ಶವ ಇಟ್ಟು ಧರಣಿ ನಡೆಸಲಾಯಿತು.

- Advertisement -


ಎಸ್.ಡಿ.ಪಿ. ಐ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಈ ಸಂದರ್ಭದಲ್ಲಿ ಮಾತನಾಡಿ, ವಾಮ ಮಾರ್ಗದಿಂದ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಸಾಲು ಸಾಲು ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ಕೊಳ್ಳೆಹೊಡೆಯುತ್ತಿದೆ. ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ದಿನಂಪ್ರತಿ ಕೋಮು ಭಾವನೆಯನ್ನು ಕೆರಳಿಸಿ ಜನರ ಗಮನವನ್ನು ಬೇರೆಡೆ ತಿರುಗಿಸಲಾಗುತ್ತಿದೆ. ಹಾಗಾಗಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಲು ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.


ಎಸ್.ಡಿ.ಪಿ.ಐ ಪುದು ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಅಮೆಮಾರ್, ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯ ಖಾದರ್, ಪುದು ಗ್ರಾಮ ಪಂಚಾಯತ್ ಸದಸ್ಯ ನಝೀರ್ ಕುಂಜತ್ಕಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುಹಮ್ಮದ್ ಶಾಫಿ ಲೀಡರ್ ಸ್ವಾಗತಿಸಿ ನಿರೂಪಿಸಿದರು. ಬಳಿಕ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜಾಗೃತಿ ಮೂಡಿಸುವುದಕ್ಕಾಗಿ ಸಾರ್ವಜನಿಕ ಸಹಿ ಅಭಿಯಾನ ನಡೆಸಲಾಯಿತು.

Join Whatsapp
Exit mobile version