ಬಿಜೆಪಿ ಸರಕಾರದ ಅರಾಜಕತೆಯ ವಿರುದ್ಧ SDPI ವತಿಯಿಂದ ಶುಕ್ರವಾರ ಪುತ್ತೂರಿನಲ್ಲಿ ಪ್ರತಿಭಟನೆ

Prasthutha|

ಮಂಗಳೂರು: ಬಿಜೆಪಿ ಸರಕಾರದ ಅರಾಜಕತೆಯ ವಿರುದ್ಧ ಎಸ್ ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಪುತ್ತೂರಿನಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

ರಾಜ್ಯದಲ್ಲಿ ಬಿಜೆಪಿ ಸರಕಾರದ ಆಡಳಿತದಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಅರಾಜಕತೆಯು ಸೃಷ್ಟಿಯಾಗಿದೆ. ಸಂಘಪರಿವಾರ ಪ್ರೇರಿತ ಶಕ್ತಿಗಳು ರಾಜ್ಯದಲ್ಲಿ ದ್ವೇಷವನ್ನು ಹರಡಿಸುತ್ತಾ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ವಿರುದ್ಧವಾಗಿ ಎಸ್ ಡಿಪಿಐ ನಾಳೆ ಎಪ್ರಿಲ್ 01 ಶುಕ್ರವಾರದಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು ಇದರ ಭಾಗವಾಗಿ ಎಸ್ ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಪುತ್ತೂರಿನಲ್ಲಿ ಸಂಜೆ 3:30 ಗಂಟೆಗೆ ಸರಿಯಾಗಿ ದರ್ಬೆ ವೃತ್ತದಿಂದ ಎ.ಸಿ ಕಚೇರಿ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಯಲಿದೆ ಎಂದು ಎಸ್ ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp