ಬಾಬಾ ಬುಡನ್ ದರ್ಗಾದ ಆಡಳಿತ ಸಮಿತಿ ರದ್ದುಗೊಳಿಸುವಂತೆ ಒತ್ತಾಯಿಸಿ SDPI ಪ್ರತಿಭಟನೆ

Prasthutha|

ಚಿಕ್ಕಮಗಳೂರು: ಜಿಲ್ಲೆಯ  ಬಾಬಾ ಬುಡನ್ ಗಿರಿಯ ಇನಾಂ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗದ ಆಡಳಿತ ನಡೆಸಲು ಕರ್ನಾಟಕ ಸರ್ಕಾರ ನೇಮಿಸಿರುವ ಸಮಿತಿಯು ಏಕಪಕ್ಷವಾಗಿದ್ದು ಈ ಸಮಿತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಹನುಮಂತಪ್ಪ ವೃತ್ತದಿಂದ ಪ್ರತಿಭಟನಾ ಜಾಥಾ ಮುಖಾಂತರ ಆಜಾದ್ ಪಾರ್ಕ್ ಬಳಿ ತಲುಪಿದ ಪ್ರತಿಭಟನಕಾರರು ಸರ್ಕಾರದ ಏಕಪಕ್ಷೀಯ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ನೇಮಿಸಿರುವ ಸಮಿತಿಯನ್ನು ವಿಸರ್ಜಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಯವರ ಮುಖಾಂತರ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ SDPI ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾದ ಗೌಸ್ ಮುನೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಝ್ಮತ್ ಪಾಷ ಹಾಗು ಜಮೀಲ್ ಖಾನ್, ಜಿಲ್ಲಾ ಸಮಿತಿ ಸದಸ್ಯರಾದ ದಂಟರಮಕ್ಕಿ ಶ್ರೀನಿವಾಸ್, ಮೂಡಿಗೆರೆ ವಿಧಾನಸಭಾ ಅಧ್ಯಕ್ಷರಾದ ಅಂಗಡಿ ಚಂದ್ರು, ಟಿಪ್ಪು ಸುಲ್ತಾನ್ ಕಮಿಟಿಯ ಜಂಶೀದ್, ಜನಶಕ್ತಿ ರಾಜ್ಯ ನಾಯಕರಾದ ಗೌಸ್ ಮೊಹಿದ್ದೀನ್ ಹಾಗೂ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Join Whatsapp