SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾನ ಮಾಸಾಚರಣೆಯ ಪೋಸ್ಟರ್ ಬಿಡುಗಡೆ

Prasthutha|

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಫೆಬ್ರವರಿ 22 ರಿಂದ ಮಾರ್ಚ್ 20 ರವರೆಗೆ  ರಕ್ತ ಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆ ಯೊಂದಿಗೆ ನಡೆಯಲಿರುವ ರಕ್ತದಾನ ಮಾಸಾಚರಣೆಯ ಪೋಸ್ಟರ್ ನ್ನು ಬಂಟ್ವಾಳದ ಪಕ್ಷದ ಕಚೇರಿಯಲ್ಲಿ ಇಂದು ಬಿಡುಗಡೆಗೊಳಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಎಸ್‌’ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ, ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ ಉಪಸ್ಥಿತರಿದ್ದರು.

Join Whatsapp