ಎಸ್’ಡಿಪಿಐ ಸವಣೂರು ಗ್ರಾಮ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

Prasthutha|

ಸವಣೂರು: ಎಸ್’ಡಿಪಿಐ ಸವಣೂರು ಗ್ರಾಮ ಸಮಿತಿ ವತಿಯಿಂದ 74ನೇ ವರ್ಷದ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು.

- Advertisement -


ಎಸ್’ಡಿಪಿಐ ಸವಣೂರು ಗ್ರಾಮ ಸಮಿತಿ ಅಧ್ಯಕ್ಷ ಹಾಗೂ ಸವಣೂರು ಗ್ರಾ.ಪಂ ಸದಸ್ಯ ರಝಾಕ್ ಕೆನರಾ ಧ್ವಜಾರೋಹಣಗೈದರು. ಎಸ್’ಡಿಪಿಐ ಸವಣೂರು ಬ್ಲಾಕ್ ಅಧ್ಯಕ್ಷ ಯೂಸುಫ್ ಹಾಜಿ ಬೇರಿಕೆ ಅಧ್ಯಕ್ಷತೆ ವಹಿಸಿದ್ದರು.


ಎಸ್’ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ರಫೀಕ್ ಎಂ.ಎ ಸಂದೇಶ ಭಾಷಣ ಮಾಡಿ ದೇಶದೆಲ್ಲೆಡೆ ಗಣರಾಜ್ಯವು ಅಪಾಯದಲ್ಲಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಂವಿಧಾನವನ್ನು ಉಳಿಸಲು ಪ್ರತಿಯೊಬ್ಬರು ಪಣತೊಟ್ಟು ಗಣರಾಜ್ಯದ ಸಂರಕ್ಷಕರಾಗಬೇಕೆಂದು ಕರೆ ನೀಡಿದರು.

- Advertisement -


ಎಸ್’ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು ಎನ್ ಸವಣೂರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ ಸದಸ್ಯೆ ಶ್ರೀಮತಿ ಚೆನ್ನು, ಸವಣೂರು ಬ್ಲಾಕ್ ಉಪಾಧ್ಯಕ್ಷ ಸುಲೈಮಾನ್ ಪಣೆಮಜಲು, ಕಾರ್ಯದರ್ಶಿ ಇಕ್ಬಾಲ್ ಕೆನರಾ ಸವಣೂರು ಗ್ರಾಮ ಸಮಿತಿ ಕಾರ್ಯದರ್ಶಿ ರಫೀಕ್ ಪಣೆಮಜಲು ಸೇರಿದಂತೆ ಹಲವಾರು ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು

Join Whatsapp