CAA ವಿರುದ್ಧ ನಿರ್ಣಯ ಮಂಡಿಸಿದ ಎಂ.ಕೆ ಸ್ಟಾಲಿನ್‌ ಅಭಿನಂದಿಸಿದ SDPI

Prasthutha|

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು SDPI ನಾಯಕರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಎಸ್.ಡಿ.ಪಿ.ಐ. ತಮಿಳುನಾಡು ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎಸ್.ಉಮರ್ ಫಾರೂಕ್, ಕಾರ್ಯದರ್ಶಿ ಅಮೀರ್ ಹಂಝ ಹಾಗೂ ವಿವಿಧ ಇಸ್ಲಾಮಿಕ್ ರಾಜಕೀಯ ಪಕ್ಷಗಳು ಮತ್ತು ಸಂಘಟನೆಯ ನಾಯಕರು ಉಪಸ್ಥಿತರಿದ್ದರು.

ಬಿಜೆಪಿ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡು ವಿಧಾನಸಭೆಯಲ್ಲಿ ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಎಂ.ಕೆ ಸ್ಟಾಲಿನ್ ತಮ್ಮ ನಿರ್ಣಯವನ್ನು ಮಂಡಿಸಿದ್ದರು.

Join Whatsapp