ಕಾನ ಜನತಾ ಕಾಲೋನಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ: ಎಸ್ ಡಿಪಿಐ

Prasthutha|

ಸುರತ್ಕಲ್: ಕಾನ ಜನತಾ ಕಾಲೋನಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಜನವರಿ 19ರಂದು ಕಾಲ್ನಡಿಗೆ ಜಾಥಾದ ಮೂಲಕ ಸುರತ್ಕಲ್ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಸ್ ಡಿ ಪಿ ಐ ಬ್ಲಾಕ್ ಅಧ್ಯಕ ಅಬ್ದುಲ್ ಸಲಾಂ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬುಧವಾರ ಬೆಳಗ್ಗೆ 9.30ಕ್ಕೆ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಸುರತ್ಕಲ್ ಪಾಲಿಕೆ ಕಚೇರಿವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕಾನ ಜನತಾ ಕಾಲೋನಿ ರಸ್ತೆಯು ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದು, ಎಲ್ಲೆಡೆ ಗುಂಡಿ ಬಿದ್ದು ಹಾಳಾಗಿದೆ. ಅತಿ ಹೆಚ್ಚಿನ ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ದಿನ ನಿತ್ಯ ವಾಹನ ಅಪಘಾತಗಳು ಕೂಡ ಸಂಭವಿಸುತ್ತಿದೆ. ರಸ್ತೆ ದುರಸ್ತಿ ಮಾಡಲು  ಒತ್ತಾಯಿಸಿ ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದ ಖಂಡಿಸಿ ಡಿಸೆಂಬರ್ 1 ರಂದು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.

- Advertisement -

ಸುರತ್ಕಲ್ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಮನವಿಗೆ ಸ್ಪಂದಿಸಿ ಕೂಡಲೇ ಕಾಮಗಾರಿ ನಡೆಸಲು ಭರವಸೆ ನೀಡಿದ್ದರು. ಆದರೆ ಒಂದು ತಿಂಗಳು ಕಳೆದರೂ ಕಾಮಗಾರಿ ಪ್ರಾರಂಭ ಮಾಡದೆ ಜನತೆಯ ಮನವಿಗೆ ಸ್ಪಂದಿಸದೆ ನಿರ್ಲಕ್ಷ್ಯ  ತೋರಿದ್ದಾರೆ. ಇದನ್ನು ಖಂಡಿಸಿ ಈ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ ಎಂದು ಅಬ್ದುಲ್ ಸಲಾಂ ತಿಳಿಸಿದ್ದಾರೆ.

Join Whatsapp