ದಿಶಾ ರವಿ ಬಂಧನ ಪ್ರಭುತ್ವದ ಹತಾಶ ಪ್ರಯತ್ನ: SDPI

Prasthutha|

- Advertisement -

ರೈತ ಹೋರಾಟವನ್ನು ಬೆಂಬಲಿಸಿ  ಟ್ವೀಟ್ ಮಾಡಿದ ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ವಿಚಾರವಾಗಿ ಕರ್ನಾಟಕದ ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ- SDPI ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಅಬ್ದುಲ್ ಜಲೀಲ್ ಕೃಷ್ಣಾಪುರ ಒತ್ತಾಯಿಸಿದ್ದಾರೆ.

ಬಿ.ಜೆ.ಪಿ ಸರ್ಕಾರ ಸಾಮಾಜಿಕ ಹೋರಾಟಗಾರರನ್ನು ಬಂಧಿಸುವುದು, ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸರಕಾರದ ತಪ್ಪು ನೀತಿಗಳನ್ನು ಪ್ರಶ್ನಿಸುವ ಹಕ್ಕಿದೆ,ಇದನ್ನು ಹತ್ತಿಕ್ಕುವ ಪ್ರಯತ್ನ ಸಲ್ಲದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -

ಈ ಕೂಡಲೇ ದಿಶಾ ರವಿ ಅವರನ್ನು ಬಿಡುಗಡೆಗೊಳಿಸಬೇಕು, ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Join Whatsapp