ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವ ಹೋರಾಟಕ್ಕೆ SDPI ಬೆಂಬಲ

Prasthutha|

- Advertisement -

 ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನಲ್ಲಿ ಅವೈಜ್ಞಾನಿಕವಾಗಿ ಟೋಲ್ ಸಂಗ್ರಹದ ವಿರುದ್ಧ ಆಸಿಫ್ ಆಪತ್ಭಾಂಧವ ನೇತೃತ್ವದಲ್ಲಿ ಕಳೆದ 13 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವದಿ ಅಹೋರಾತ್ರಿ ಪ್ರತಿಭಟನೆಗೆ ಇಂದು ಎಸ್ಡಿಪಿಐ ಉತ್ತರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಯಾಸೀನ್ ಅರ್ಕುಳ ನೇತೃತ್ವದ ನಿಯೋಗ ಭೇಟಿ ನೀಡಿ ಪ್ರತಿಭಟನೆಗೆ ನೈತಿಕ ಬೆಂಬಲ ಸೂಚಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಯಾಸಿನ್, ಸಂಬಂದಪಟ್ಟ ಇಲಾಖೆ ಕೂಡಲೇ ಮಧ್ಯ ಪ್ರವೇಶಿಸಿ ಸೂಕ್ತ  ಕ್ರಮ ಕೈಗೊಳ್ಳಬೇಕು , ಟೋಲ್ ಸಂಗ್ರಹದ ನೆಪದಲ್ಲಿ ನಡೆಯುತ್ತಿರುವ ಹಗಲು ದರೋಡೆ ಕೊನೆಯಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಸಂಘಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರ ರೀತಿಯ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

- Advertisement -

 ಈ ಸಂದರ್ಭದಲ್ಲಿ ಉತ್ತರ ಅಸೆಂಬ್ಲಿಯ ಉಪಾಧ್ಯಕ್ಷರಾದ ಲಾನ್ಸಿ ಥೋರೆಸ್ ಹಾಗೂ  ಸಮಿತಿ ಸದಸ್ಯರು ಜೊತೆಗಿದ್ದರು.

Join Whatsapp