ಮಾರ್ಚ್ 5ರಂದು ಎಸ್’ಡಿಪಿಐ ಸುರತ್ಕಲ್ ಬ್ಲಾಕ್ ಸಮಿತಿ ವತಿಯಿಂದ ರಕ್ತದಾನ ಶಿಬಿರ

Prasthutha|

ಮಂಗಳೂರು: ಎಸ್’ಡಿಪಿಐ ಸುರತ್ಕಲ್ ಬ್ಲಾಕ್ ಸಮಿತಿ ವತಿಯಿಂದ ಮಾರ್ಚ್ 5ರಂದು ‘ರಕ್ತ ಕೊಟ್ಟು –ಬಾಂಧವ್ಯ ಕಟ್ಟು’ ಎಂಬ ಧ್ಯೇಯವಾಕ್ಯದೊಂದಿಗೆ ಏಕಕಾಲದಲ್ಲಿ ನಾಲ್ಕು ಸ್ಥಳದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

- Advertisement -


ಅಂದು ಬೆಳಗ್ಗೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ.


ಸುರತ್ಕಲ್’ನ ಚೊಕ್ಕಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಕೃಷ್ಣಾಪುರ ಲಾಲ್ ಬಹದೂರ್ ಶಾಸ್ತ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ , ಕಾಟಿಪಳ್ಳದ ಜಾಸ್ಮೀನ್ ಹಾಲ್ , ಕಾನ ಮಸೀದಿ ಬಳಿ ಮಾರ್ಚ್ 5ರ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2 ಗಂಟೆ ರವರೆಗೆ ರಕ್ತದಾನ ಶಿಬಿರ ನಡೆಯಲಿದೆ ಎಂದು ಎಸ್’ಡಿಪಿಐ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.



Join Whatsapp