ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯವನ್ನು ಸೇವಾ ಭಾರತಿ ಹೆಸರಲ್ಲಿ ದುರುಪಯೋಗ ಪಡಿಸುತ್ತಿರುವ ಬಿಜೆಪಿ | SDTU ಖಂಡನೆ

Prasthutha|

ಮಂಗಳೂರು: ಕೋವಿಡ್ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸರಕಾರದ ಕಾರ್ಮಿಕ ಇಲಾಖೆಯಿಂದ ನೀಡುತ್ತಿರುವ ಕಿಟ್ ಗಳನ್ನು ಸಂಘಪರಿವಾರದ ಅಂಗ ಸಂಸ್ಥೆಯಾಗಿರುವ ಸೇವಾ ಭಾರತಿ ಮೂಲಕ ದ.ಕ. ಜಿಲ್ಲೆಯಲ್ಲಿ ವಿವಿಧ ಕಡೆ ಹಂಚಿಕೆ ಮಾಡುತ್ತಿರುವುದು ಖಂಡನೀಯ, ಮಾತ್ರವಲ್ಲದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಅಥವಾ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಾರದೆ ಸರಕಾರಿ ಸೌಲಭ್ಯವನ್ನು ದುರುಪಯೋಗ ಪಡಿಸಿದವರನ್ನು ಹೊಣೆಗಾರರನ್ನಾಗಿಸಬೇಕು ಎಂದು ಸೋಷಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ದಕ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ.

- Advertisement -

ಜನರ ತೆರಿಗೆ ಹಣದಿಂದ ಪುಕ್ಕಟೆ ಪ್ರಚಾರಕ್ಕಾಗಿ ಸರಕಾರಿ ಸೌಲಭ್ಯವನ್ನು ಖಾಸಗಿ ಹೆಸರಲ್ಲಿ ದುರುಪಯೋಗ ಪಡಿಸುವುದನ್ನು ನಿಲ್ಲಿಸಲಿ ಎಂದು SDTU ಜಿಲ್ಲಾ ಕಾರ್ಯದರ್ಶಿ ಇರ್ಫಾನ್ ಸುರತ್ಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp