ಮಸೀದಿಯಲ್ಲಿ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆಯ ಬೆದರಿಕೆ| ಮಥುರಾದಲ್ಲಿ ಸೆಕ್ಷನ್ 144 ಜಾರಿ

Prasthutha|

ಮಥುರಾ: ಮಸೀದಿಯಲ್ಲಿ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಬೆದರಿಕೆ ಹಾಕಿದ್ದು, ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

- Advertisement -

ಹಿಂದೂ ಮಹಾಸಭಾ ಮತ್ತು ನಾರಾಯಣಿ ಸೇನಾ, ಮಸೀದಿಯ ತೆರವಿಗೆ ಆಗ್ರಹಿಸಿ ವಿಶ್ರಮ್ ಘಾಟ್ ನಿಂದ ಮಸೀದಿ ಇರುವ ಪ್ರದೇಶದವರೆಗೆ ರ್ಯಾ ಲಿ ನಡೆಸಿ ಮಸೀದಿಯಲ್ಲಿ ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸುವುದಾಗಿ ಹೇಳಿಕೆ ನೀಡಿದೆ.

ಎರಡೂ ಧಾರ್ಮಿಕ ಪ್ರದೇಶಗಳಲ್ಲಿ ಭದ್ರತೆಯನ್ನು ಪರಿಶೀಲನೆ ನಡೆಸಲಾಗಿದೆ. ಹಿಂದೂ ಮಹಾಸಭಾ ವಿಗ್ರಹ ಸ್ಥಾಪನೆ ಮಾಡುವುದಕ್ಕಾಗಿ ಮನವಿ ಸಲ್ಲಿಸಿತ್ತು. ಆದರೆ ಅನುಮತಿ ನಿರಾಕರಿಸಲಾಗಿದೆ. ಯಾರಿಗೂ ಶಾಂತಿ ಕದಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಹಾಲ್ ತಿಳಿಸಿದ್ದಾರೆ.

Join Whatsapp