ಜ.31ರ ವರೆಗೆ ನೋಯ್ಡಾದಲ್ಲಿ ಸೆಕ್ಷನ್ 144 ಜಾರಿ : ಪ್ರತಿಭಟನೆಗೆ ಅವಕಾಶವಿಲ್ಲ

Prasthutha|

ನೋಯ್ಡಾ : ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ, ಸುರಕ್ಷತೆಯ ದೃಷ್ಟಿಯಿಂದ ಗೌತಮ ಬುದ್ಧ ನಗರ ಜಿಲ್ಲೆಯಲ್ಲಿ ಜ.31ರ ವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

- Advertisement -

ಜ.22ರಿಂದ ಜ.31ರ ವರೆಗೆ ಗೌತಮ ಬುದ್ಧ ನಗರ ಜಿಲ್ಲೆಯಲ್ಲಿ ಈ ಆದೇಶ ಜಾರಿಯಲ್ಲಿರಲಿದೆ. ಯಾವುದೇ ವ್ಯಕ್ತಿ ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಆಶುತೋಷ್ ದ್ವಿವೇದಿ ಹೇಳಿದ್ದಾರೆ.

ಈ ವೇಳೆ ಖಾಸಗಿ ಡ್ರೋಣ್ ಗಳನ್ನು ಬಳಸುವಂತಿಲ್ಲ. ಆಡಳಿತದ ಅನುಮತಿಯಿಲ್ಲದೆ ಪ್ರತಿಭಟನೆಗಳನ್ನು ನಡೆಸುವಂತಿಲ್ಲ. ಟ್ರಾಫಿಕ್ ಜಾಮ್ ಮಾಡುವಂತಿಲ್ಲ. ಹಾನಿಕಾರಕ ವಸ್ತುಗಳನ್ನು ಬಳಸುವಂತಿಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ ಮದ್ಯಪಾನಕ್ಕೆ ಅನುಮತಿ ಇಲ್ಲ ಎಂದು ಪ್ರಕಟನೆಯೊಂದರಲ್ಲಿ ತಿಳಿಸಲಾಗಿದೆ.

- Advertisement -

ದೆಹಲಿಯಲ್ಲಿ ನಡೆಯುವ ರೈತರ ಪ್ರತಿಭಟನೆಗೆ ಜ.26ರಂದು ಹೆಚ್ಚು ಜನರು ಜಮಾವಣೆಯಾಗುವ ಸಾಧ್ಯತೆಯಿದೆ.

Join Whatsapp