ಕೊಡಗು: ಪತ್ರಕರ್ತರ ಸಂಘದ ತಾಲ್ಲೂಕು ಸಂಘಕ್ಕೆ ಆಯ್ಕೆ

Prasthutha|

ಗೋಣಿಕೊಪ್ಪಲು: ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಯಾಗಿದೆ.

- Advertisement -

ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಉಪಾಧ್ಯಕ್ಷ ಪುತ್ತಂ ಪ್ರದೀಪ್, ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಕಾರ್ಯದರ್ಶಿ ರಜಿತಾ ಕಾರ್ಯಪ್ಪ, ನಿರ್ದೇಶಕರಾಗಿ ಹೆಮಂತ್ ಕುಮಾರ್, ಡಿ.ಮಂಜುನಾಥ್ ಅವರು ಆಯ್ಕೆಯಾಗಿದ್ದಾರೆ.

ಪೊನ್ನಂಪೇಟೆ ತಾಲೂಕು ಸಂಘದ ಅಧ್ಯಕ್ಷ ಕಿಶೋರ್ ನಾಚಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್.ದಿನೇಶ್, ಕೋಶಾಧಿಕಾರಿ ವಿ.ವಿ ಅರುಣ್ ಕುಮಾರ್, ನಿರ್ದೇಶಕರಾಗಿ ಅನೀಶ್ ಮಾದಪ್ಪ, ಮಂಡೇಡ ಅಶೋಕ್ ಅವರು ಆಯ್ಕೆ ಆಗಿದ್ದಾರೆ. ಬಿ.ಇ ಕಿರಣ್ ಹಾಗೂ ಪ್ರದಾಪ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಚುನಾವಣಾ ಉಸ್ತುವಾರಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ವೀಕ್ಷಕರಾದ ಬಾಚರಣಿಯಂಡ ಅನುಕಾರ್ಯಪ್ಪ ಹಾಗೂ ಕೆ‌.ಎ.ಆದಿತ್ಯ ಇದ್ದರು.

Join Whatsapp