ಸೆಲ್ಫಿ ಕ್ರೇಜಿ: ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Prasthutha|

ರಾಯಚೂರು: ಸೆಲ್ಫಿ ಕ್ರೇಜ್ ನಿಂದ ಕಾಲುಜಾರಿ ನೀರಿಗೆ ಬಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.

- Advertisement -


ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಮೃತಪಟ್ಟವರು.
ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಈ ಘಟನೆ ನಡೆದಿದೆ. ಪಿಕ್ನಿಕ್ ಗಾಗಿ ಬಂದಿದ್ದ ವಿದ್ಯಾರ್ಥಿಗಳು ನಿನ್ನೆ ಸಂಜೆ ಸೆಲ್ಫಿ ತೆಗೆಯಲು ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು.


ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Join Whatsapp