ಸಿದ್ದರಾಮಯ್ಯರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿ: ಕೇಂದ್ರಕ್ಕೆ ಬಿಜೆಪಿ ಸಂಸದ ಒತ್ತಾಯ

Prasthutha|

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಲು ವ್ಯವಸ್ಥೆಗೊಳಿಸುವಂತೆ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಇಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಮಾಧ್ಯಮದೊಂದಿಗೆ ಮಾತನಾಡಿದ ಪ್ರಸಾದ್, ನಿರಂತರ ತಾಲಿಬಾನ್ ಬಗ್ಗೆ ಮಾತನಾಡುತ್ತಿರುವುದು ಮತ್ತು ಅವರ ಬಗ್ಗೆ ಒಲವು ಬೆಳೆಸಿದಂತೆ ಕಂಡುಬರುವುದರಿಂದ ಸಿದ್ದರಾಮಯ್ಯ ಅವರನ್ನು ಅಫ್ಘಾನಿಸ್ತಾನಕ್ಕೆ ಪ್ಯಾಕ್ ಅಪ್ ಮಾಡಲು ಕೇಂದ್ರ ಮುಂದಾಗಲಿ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯನ್ನು ಉಲ್ಲೇಖಿಸುವಾಗ ಸಿದ್ದರಾಮಯ್ಯ ಏಕವಚನ ಬಳಸಿರುವುದರಿಂದ ಮೋದಿ ಅವರ ಗೌರವಕ್ಕೆ ಧಕ್ಕೆ ಆಗುವುದಿಲ್ಲ. ಇದರಿಂದ ಸಿದ್ದರಾಮಯ್ಯ ಅವರು ಗೌರವವನ್ನು ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

Join Whatsapp