ಚಿಂತನ ಮಂಥನ ಶಿಬಿರದಿಂದ ದೂರ ಉಳಿದ ಕಾಂಗ್ರೆಸ್ ಹಿರಿಯ ನಾಯಕರು !

Prasthutha|

ಬೆಂಗಳೂರು: ಉದಯಪುರದಲ್ಲಿ ನಡೆದ ರಾಷ್ಟ್ರೀಯ ಚಿಂತನ ಮಂಥನ ಶಿಬಿರದ ಮಾದರಿಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಶಿಬಿರದಿಂದ ಹಲವು ಹಿರಿಯ ಮುಖಂಡರು ದೂರ ಉಳಿದಿದ್ದಾರೆ. ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪಾಲ್ಗೊಂಡಿದ್ದ ಸಭೆಯಿಂದ ಹಲವು ಹಿರಿಯರು ಮುಖಂಡರು ದೂರ ಉಳಿದಿದ್ದಾರೆ.

- Advertisement -


ವಿಧಾನಸಭೆಯಿಂದ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ತಮ್ಮ ಹೆಸರು ಶಿಫಾರಸ್ಸುಗೊಂಡಿದ್ದರೂ ಕೊನೆ ಕ್ಷಣದಲ್ಲಿ ತಮ್ಮ ಹೆಸರು ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂ.ಆರ್. ಸೀತಾರಾಮ್, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಂಸದ ಮುದ್ದ ಹನುಮೇಗೌಡ ಸೇರಿ ಹಲವು ಮಂದಿ ಗೈರು ಹಾಜರಾಗಿದ್ದಾರೆ.


ಬಹುತೇಕ ಮಂದಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶಗೊಂಡಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಹಾಗೂ ಹಿರಿಯರನ್ನು ಕಡೆಗಣಿಸಲಾಗಿದೆ. ನಮ್ಮ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp