ರಾಷ್ಟ್ರಗೀತೆಗೆ ಧ್ವನಿಯಾಗುತ್ತಲೇ ಇಹಲೋಕ ತ್ಯಜಿಸಿದ ಹಿರಿಯ ಪತ್ರಕರ್ತ ಅಬ್ದುಲ್ ರಝಾಕ್

Prasthutha|

ಚಿಕ್ಕೋಡಿ; ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನಡೆಸಿದ ಬಳಿಕ ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಹಿರಿಯ ಪತ್ರಕರ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದೆ.
ಸ್ಥಳೀಯ ಪತ್ರಿಕೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ರಝಾಕ್ ಅರಳಿಕಟ್ಟೆ [ 85] ರವರು ಅಧಿಕಾರಿಗಳು, ಮಕ್ಕಳು ಹಾಗೂ ಸಾರ್ವಜನಿಕರ ಜೊತೆ ನಿಂತು ರಾಷ್ಟ್ರಗೀತೆ ಹಾಡುತ್ತಿರುವ ವೇಳೆ ಕುಸಿದು ಬಿದ್ದರು.
ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.

Join Whatsapp