ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಹಿರಿಯ ನಾಯಕರು ರಾಹುಲ್ ಗಾಂಧಿಗೆ ಒತ್ತಡ ಹೇರಿದ್ದರು: ಶಶಿ ತರೂರ್ ಆರೋಪ

Prasthutha|

ಕೊಚ್ಚಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಆಂತರಿಕ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿ ಅವರಿಗೆ ಕೆಲವು ಹಿರಿಯ ನಾಯಕರು ಒತ್ತಡ ಹೇರಿದ್ದರು ಎಂದು ತಿರುವನಂತಪುರಂ ಸಂಸದ ಹಾಗೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶಶಿ ತರೂರ್ ಆರೋಪಿಸಿದ್ದಾರೆ.

- Advertisement -

ಕೇರಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಬೇಕು ಎಂದು ಕಳೆದ 10 ವರ್ಷಗಳಿಂದ ರಾಹುಲ್ ಹೇಳುತ್ತಲೇ ಬಂದಿದ್ದರು. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿಗೆ ಕೆಲವು ಹಿರಿಯರು ಒತ್ತಡ ಹೇರಿದ್ದರು. ಆದರೆ ನಾನು ಆ ರೀತಿ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ನನಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯದಂತೆ ರಾಹುಲ್ ಗಾಂಧಿ ನನಗೆ ಸೂಚಿಸಿದ್ದಾರೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ರಾಹುಲ್ ಮನವಿ ಮಾಡಿದ್ದಾರೆ ಎಂದು ಸಂಸದ ಶಶಿ ತರೂರ್ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದ ಹಿರಿಯ ನಾಯಕರು ನನಗೆ ಬೆಂಬಲ ನೀಡುತ್ತಾರೆ ಎಂದು ನಾನು ಎಂದಿಗೂ ನಿರೀಕ್ಷಿಸಿರಲಿಲ್ಲ ಮತ್ತು ಮುಂದೆಯೂ ನಿರೀಕ್ಷಿಸುವುದಿಲ್ಲ. ಆದರೆ ನನಗೆ ಎಲ್ಲರ ಬೆಂಬಲ ಸೂಚಿಸಬೇಕು ಎಂದು ಕಾಂಗ್ರೆಸ್ ನಾಯಕರಲ್ಲಿ ಅವರು ಮನವಿ ಮಾಡಿದರು.

Join Whatsapp