Home ಕರಾವಳಿ ಆರೆಸ್ಸೆಸ್ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನ

ಆರೆಸ್ಸೆಸ್ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನ

ಪುತ್ತೂರು: ಆರೆಸ್ಸೆಸ್ ಹಿರಿಯ ನಾಯಕ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್‌ ರವರು ನಿಧನರಾಗಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಡಿ.6) ಕೊಂಬೆಟ್ಟಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ರಾಮ ಭಟ್‌ ಅವರು ಜನಸಂಘ, ಬಿಜೆಪಿ ಮೂಲಕ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯಂತಹ ರಾಷ್ಟ್ರ ಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.

1985ರ ಬಳಿಕ ಸಕ್ರಿಯ ರಾಜಕೀಯದಿಂದ ದೂರವಾದರೂ ಬಿಜೆಪಿಯ ಆಗು ಹೋಗುಗಳಲ್ಲಿ ರಾಮ ಭಟ್ಟರ ಅಭಿಪ್ರಾಯಗಳೇ ಮುಖ್ಯ ಪಾತ್ರ ವಹಿಸುತ್ತಿದ್ದವು.

Join Whatsapp
Exit mobile version