ಬಿಜೆಪಿಗೆ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ವಿಕಾಸ್ ಬನ್ಸೋಡೆ

Prasthutha|

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ವಿಕಾಸ್ ಬನ್ಸೋಡೆ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಕಾಸ್ ಬನ್ಸೋಡೆ ಅವರನ್ನು ಬರಮಾಡಿಕೊಂಡರು.

- Advertisement -


ಈ ವೇಳೆ ಮಾತನಾಡಿದ ಸಿ.ಟಿ. ರವಿ, ರಾಜ್ಯಪಾಲರುಗಳಿಗೆ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿರುವ ಹಿರಿಯ ವಕೀಲ ವಿಕಾಸ್ ಬನ್ಸೋಡೆ ಕಾನೂನಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದಾರೆ. ಬನ್ಸೋಡೆ ಅವರ ಸೇರ್ಪಡೆಯಿಂದ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಲ ಬಂದಂತಾಗಿದೆ ಎಂದು ಹೇಳಿದರು.


ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಸೇರಿದಂತೆ ನಾಲ್ವರು ರಾಜ್ಯಪಾಲರಿಗೆ ವಿಕಾಸ್ ಬನ್ಸೋಡೆ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.

Join Whatsapp