ಪ್ರತ್ಯೇಕ ಎರಡು ಅಪಘಾತ; ಇಬ್ಬರು ಸಾವು | ಕಳೆದ 36 ಗಂಟೆಗಳಲ್ಲಿ ನಾಲ್ವರು ದ್ವಿಚಕ್ರ ವಾಹನ ಸವಾರರ ದುರ್ಮರಣ

Prasthutha|

ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ 36 ಗಂಟೆಗಳಲ್ಲಿ ನಡೆದ ನಾಲ್ಕು ಪ್ರತ್ಯೇಕ ಅಪಘಾತಗಳಲ್ಲಿ 4 ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ. ಇಂದು ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವಿಗೀಡಾಗಿದ್ದಾರೆ.  

- Advertisement -

ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿದ್ದಾರೆ.

ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಬೈಕ್ ಹಾಗೂ ಬೊಲೆರೊ ವಾಹನ ವಿಟ್ಲ ಭಾಗದಿಂದ ಉಕ್ಕುಡಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಕಾಶಿಮಠ ಬಳಿ, ಬೊಲೆರೊ ಬೈಕ್ ನ ಹಿಂಭಾಗಕ್ಕೆ ಗುದ್ದಿದೆ. ಇದರಿಂದಾಗಿ ಬೈಕ್ ಸವಾರ ಬಾಲಕೃಷ್ಣ ಅವರು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸ್ಕೂಟರ್ – ಪಿಕಪ್ ಅಪಘಾತ : ಮೊಟ್ಟೆತಡ್ಕ ಸಮೀಪ ನಡೆದ ಮಹೀಂದ್ರಾ ಪಿಕಪ್ ಮತ್ತು ಟಿವಿಎಸ್ ಜುಪಿಟರ್ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.  

ಸಾಮೆತಡ್ಕ ನಿವಾಸಿ ಪ್ರಸಾದ್ ಅವರು ಅಪಘಾತದಲ್ಲಿ ಮಡಿದವರು. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು, ಪಿಕಪ್ ಚರಂಡಿಗಿಳಿದಿದೆ.



Join Whatsapp
Exit mobile version