ಸರಣಿ ಹತ್ಯೆ: ವರದಿ ನೀಡಲು ಸೂಚಿಸಿದ ಜಿ. ಪರಮೇಶ್ವರ್

Prasthutha|

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ನಗರಗಳಲ್ಲಿ ಹತ್ಯಾ ಸರಣಿ ನಡೆಯುತ್ತಿರುವ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡ ನಗರಗಳಲ್ಲಿ ಪದೇ ಪದೇ ಇಂತಹ ಕೊಲೆ ಘಟನೆಗಳು ಸಂಭವಿಸುತ್ತಿವೆ.‌ಇದರ ಕಾರಣಗಳನ್ನು ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದೇನೆ. ಸಾಧ್ಯವಾದರೆ ನಾನೇ ಅಲ್ಲಿಗೆ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದರು.

ಯುವತಿಗೆ ಬೆದರಿಕೆ ಇದ್ದ ಕುರಿತು ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಲಿಖಿತ ದೂರು ಸಲ್ಲಿಸಿರಲಿಲ್ಲ, ಮೌಖಿಕವಾಗಿ ತಿಳಿಸಿದ್ದರು ಎಂಬ ಮಾಹಿತಿ ಇದೆ. ಆದರೂ,
ಕರ್ತವ್ಯಲೋಪದ ಆರೋಪದಡಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರನ್ನು ಅಮಾನತು ಮಾಡಲಾಗಿದೆ. ತನಿಖಾ ವರದಿ ಆಧರಿಸಿ ಮುಂದಿನ ಕ್ರಮ
ಜರುಗಿಸಲಾಗುವುದು ಎಂದರು.

Join Whatsapp
Exit mobile version